Monday, August 03, 2009

ಕನ್ನಡಿಗ ಸಣ್ಣವ, ಅಸಹನೆಯುಳ್ಳವ, ಭಾಷಾಂದ, ಕನ್ನಡೇತರರ ವಿರೋಧಿ, ಸದಾ ದ್ವೇಷ ಸಾಧನೆಯ ಗುರಿಯುಳ್ಳವ!!


ಇದು ನನಗೆ ಬಂದ ಮಿಂಚೆ, ಇದನ್ನು ನಾವು ಕನ್ನಡ ಮಾಧ್ಯಮಗಳlli ನೋಡಲು ಆಗುವದಿಲ್ಲ. ಯಾಕೆಂದರೆ ಪ್ರಾಯೋಜಿತ ಲೇಕನಗಳನ್ನು ಬರೆಸಿ ಹಾಕುವ ಆ ಮಂದಿಗೆ ಇ ತರಹದ ಪತ್ರಗಳನ್ನು ಕಸದ ಬುಟ್ಟಿಗೆ ಹಾಕಿ , ಜನರನ್ನು ತಪ್ಪು ದಾರಿಗೆ ತಳ್ಳುತ್ತಿದ್ದಾರೆ, ಆದ್ದರಿಂದ ಇದನ್ನು ಪ್ರತಿಯೊಬ್ಬ ಕನ್ನಡ ಬ್ಲಾಗಿಗ ಪ್ರಕಟಿಸಬೇಕು.

೨೦೦೯ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಘೋಷಿಸಿ! ಬೆಂಗಳೂರಿನ ಹಲಸೂರು ಕೆರೆ ಅಂಗಳದಲ್ಲಿ ತಿರುವಳ್ಳುವರ್ ಪ್ರತೆಮೆ ಅನಾವರಣಕ್ಕೆ ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರ ಪಣ ತೊಟ್ಟು ನಿಂತಿದೆ. ಕಳೆದೆರಡು ವಾರಗಳಿಂದ ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ನಮ್ಮ ಸಾಹಿತಿ ಬುದ್ದಿ ಜೀವಿಗಳು! ಕನ್ನಡ ಪರ ಚಿಂತಕರು! ಕರ್ನಾಟಕದ ಬಹುತೇಕ ಎಲ್ಲಾ ಕನ್ನಡ ಪತ್ರಿಕೆಗಳವರು ಸರ್ಕಾರದ ಈ ಯೋಚನೆಗೆ ಬೆಂಬಲ ಸೂಚಿಸಿ ಹೇಳಿಕೆಗಳನ್ನು ನೀಡುತ್ತ, ಸಮಸ್ತ ಕನ್ನಡಿಗರು ತಮ್ಮ ಸಣ್ಣತನ, ಅಸಹನೆ, ಸಂಕುಚಿತತೆ, ವಿರೋಧ, ವೈಮನಸ್ಯ ತೊರೆದು ಸರಕಾರದ ಈ ನಿಲುವಿಗೆ ಬೆಂಬಲ ತೋರಬೇಕೆಂದು ಕರೆ ನೀಡುತ್ತಿದ್ದಾರೆ.

ಈ ನಿಟ್ಟಿನಲ್ಲಿ ನಾವೆಲ್ಲ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣವನ್ನು ಏಕೆ ತಡೆ ಹಿಡಿಯಲಾಗಿದೆ ಎಂಬುದನ್ನು ಒಮ್ಮೆ ಹಿಂತಿರುಗಿ ನೋಡಬೇಕಿದೆ:


೧೯೯೧ರಲ್ಲಿ ಬೆಂಗಳೂರಿನ ಹಲಸೂರು ಕೆರೆ ಅಂಗಳದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಕೆಲವು ತಮಿಳು ಹಿತಾಸಕ್ತಿದಾರರು ಮುಂದಾಗಿದ್ದಾಗ, ಕನ್ನಡಪರ ಸಂಘಟನೆಗಳ ಒಗ್ಗೂಡಿದ ಪ್ರತಿಭಟನೆಯಿಂದಾಗಿ ಅನಾವರಣ ಸ್ಥಗಿತಗೊಂಡಿತ್ತು.
ಈ ೧೮ ವರ್ಷಗಳಲ್ಲಿ ತಮಿಳರ ಪರವಾದ (ಸಂಕೇತವಾದ!) ಈ ಪ್ರತಿಮೆ ಅನಾವರಣದ ವಿರೋಧಕ್ಕೆ ಕಾಲಾನುಕಾಲವಾಗಿ ಪಟ್ಟಿ ಮಾಡಬಹುದಾದ ಕಾರಣಗಳು:
ತಮಿಳರು ನಾವು ಬೆಂಗಳೂರಿನವರು ಆದರೆ ಕರ್ನಾಟಕಕ್ಕೆ ಸೇರಿದವರಲ್ಲ ಎಂಬ ಭಾವನೆ ಇಟ್ಟುಕೊಂಡಿರುವುದು, ಇಲ್ಲಿ ನೆಲೆಸಿರುವ ತಮಿಳರ ಉದ್ದೇಶ ಬೆಂಗಳೂರನ್ನು ಕೇಂದ್ರಾಡಳಿತಕ್ಕೆ ಒಳಪಡಿಸುವುದಾಗಿರುವುದು , ತಿರುವಳ್ಳುವರ್ "ರಾಷ್ಟ್ರ ಕವಿ" ಅವರ ಪ್ರತಿಮೆ ಸ್ಥಾಪನೆ ಬೇಡ ಎನ್ನುವ ಕನ್ನಡಿಗರು ಎಂತಹ ದೇಶ ಭಕ್ತರು ಎಂದು ಸಹೃದಯಿಗಳಾದ ಕನ್ನಡಿಗರನ್ನೇ ಪ್ರಶ್ನಿಸಿದ್ದು,

ಅಂದು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪಿಸಿ ಎಂದು ಬರಹಗಳನ್ನು ಬರೆಸಿ, ಸರ್ಕಾರವನ್ನು ಆಗ್ರಹಿಸಿ, ತಿರುವಳ್ಳುವರ್ ಪ್ರತಿಮೆ ಸ್ಥಾಪಿಸಲು ಭರವಸೆ ನೀಡುವ, ಅದಕ್ಕೆ ಪ್ರಯತ್ನಿಸುವ ಸದಸ್ಯನಿಗೆ ಮಾತ್ರ ಚುನಾವಣೆಗಳಲ್ಲಿ ಮತ ಹಾಕಿ ಎಂದು ಇಲ್ಲಿನ ತಮಿಳು ಸಮುದಾಯಕ್ಕೆ ಆದೇಶ ಹೊರಡಿಸಿದ್ದು,

ವೀರಪ್ಪನ್ ಒತ್ತಾಸೆಯಿಂದ ರಾಜಕುಮಾರ್ ಬಿಡುಗಡೆ ಆಗಬೇಕಾದ್ರೆ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಆಗಬೇಕು ಎಂಬ ಹಠ ಮಾಡಿದ್ದು.

ಇದರ ಜತೆಗೆ ಇತ್ತೀಚಿನ ದಿನಗಳಲ್ಲಿ ಕನ್ನಡಿಗರನ್ನು ಒದೆಯಬೇಕು ಎಂದು ಹೇಳಿಕೆ ನೀಡಿದ್ದು, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗದಂತೆ ತೊಡರುಗಾಲು ಹಾಕಿರುವುದು, ತಮ್ಮ ರಾಜ್ಯದ ಯೋಜನೆಗಳ ಅನುಷ್ಠಾನಕ್ಕಾಗಿ ಕರ್ನಾಟಕದ ಹಿತಾಸಕ್ತಿಯನ್ನು ಬಲಿಗೊಡುತ್ತಿರುವುದು.ಹೀಗೆ ಕನ್ನಡಿ
ಗನ ಸ್ವಾಭಿಮಾನ ಮತ್ತು ಸಾರ್ವಭೌಮತ್ವವನ್ನು ಪದೆ ಪದೆ ಕೆಣಕಲು ಪ್ರಯತ್ನಿಸುತ್ತಿರುವುದೇ ಆಗಿದೆ.

ಮೇಲಿನ ತಮಿಳರ ಈ ಎಲ್ಲ ಸಣ್ಣತನಗಳನ್ನು ಸಹಿಸಿಕೊಂಡು ಅವರೊಡನೆ ಇನ್ನೂ ಸಹಬಾಳ್ವೆ ನಡೆಸುತ್ತಿರುವ ಕನ್ನಡಿಗನದು ಸಂಕುಚಿತ ಸ್ವಭಾವ ಎನ್ನುವುದಾದರೆ ಕನ್ನಡಿಗ ಸಣ್ಣವ, ಅಸಹನೆಯುಳ್ಳವ, ಭಾಷಾಂದ, ಕನ್ನಡೇತರರ ವಿರೋಧಿ, ಸದಾ ದ್ವೇಷ ಸಾಧನೆಯ ಗುರಿಯುಳ್ಳವ ಎಂದು ಒಪ್ಪಿಕೊಳ್ಳಬಹುದಾಗಿದೆ.

ಈ ಕುರಿತಾಗಿ ಇಂದು ಪ್ರಜಾವಾಣಿ - ವಾಚಕರ ವಾಣಿಯಲ್ಲಿ ಪ್ರಕಟವಾಗಿರುವ ಲೇಖನವನ್ನು ನೋಡಿ.... ಕರ್ನಾಟಕದಲ್ಲಿ ತಿರುವಳ್ಳುವರ್ ಕುರಿತಾಗಿ ಇಷ್ಟೆಲ್ಲಾ ಚರ್ಚೆಗಳು ನಡೆಯುತ್ತಿರುವಾಗ, ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಬೆಂಗಳೂರಿನಲ್ಲಿಯೇ ಆರಾಮವಾಗಿ ಕಾಲ ಕಳೆಯುತ್ತಿದ್ದು ನಮ್ಮ ನಮ್ಮವರೆ ಕಿತ್ತಾಡುವುದನ್ನು ನೋಡಿ ಪುಳಕಿತಗೊಂಡಿರುವುದು ಸತ್ಯ.

ತಮಿಳರು ತಮ್ಮ ದೊಡ್ಡತನ ಮೆರೆಯುವ ಒಂದು ಹೇಳಿಕೆ ನೀಡುವ ಬಗ್ಗೆ ತಲೆಯೆ ಕೆಡಿಸಿಕೊಂಡಿಲ್ಲ.
ತಮಿಳರು ಎಂದಿಗೂ ಸ್ವಾಭಿಮಾನಿಗಳು, ದೊಡ್ಡತನ ಮೆರೆದು ದಡ್ಡರಾಗುವವರಲ್ಲ ಎಂದು ಮಾತ್ರ ಇದರಿಂದ ಸಾಬೀತಾಗುತ್ತಿದೆ. ಯಾವ ಕಾರಣಕ್ಕಾಗಿ ನಮ್ಮನ್ನಾಳುತ್ತಿರುವವರು ಅವರ ಹಿಂಬಾಲಕರು ಈ ನಿಲುವಿಗೆ ತಲೆಬಾಗಿದ್ದಾರೆ? ಉತ್ತರವಿದೆಯೇ ??

ಕಲ್ಯಾಣ ರಾಮನ್