Tuesday, October 28, 2008

ಒಂದು ಸಾವಿನ ಸುತ್ತ ..( ನಮ್ಮ ಊರಿನಲ್ಲಿ ಒಂದು ದಿನ)

ನಮ್ಮ ಊರಿನಲ್ಲಿ ಒಂದು ಎರಿಯಾ ಇದೆ, ಅದರ ಹೆಸರು ಬಿಮಾಲ ಅಂತ. ನೈಸರ್ಗಿಕವಾಗಿ,ಭೌಗಳಿಕವಾಗಿ ಬಹಳ ಚೆನ್ನಾಗಿರುವ ಪ್ರದೇಶ.
ಆದರೆ ಅಲ್ಲಿ ಅರಾಜಕತೆ ತಾಂಡವ ಆಡುತ್ತಿದೆ, ಅಲ್ಲಿನ ಜನರಿಗೆ ಸಂಸ್ಕ್ಟುತಿ ಇಲ್ಲ, ಬೈಗಳ, ಹೊಡೆದಾಟ ಅವರ ಜೀವನದ ಒಂದು ಭಾಗ
ಆಗಿದೆ. ಮಾಡಲು ಕೆಲಸವಿಲ್ಲ, ಆದ್ದರಿಂದ ಸದಾ ಮನೆಯ ಮುಂದೆ ಕುಳಿತುಕೊಂಡು ಹೋಗಿ ಬರುವರಿಗೆ ಕಾಟ ಕೊಡುತ್ತಾ ಇರುತ್ತಾರೆ. ಊಟ ಮಾಡಬೇಕು ಎಂದರೆ
ಹೊಡೆದಾಟ ಮಾಡಿ, ಎಳೆದಾಡಿಯೇ ಮಾಡಬೇಕು, ಹಾಗೆ ಮಾಡದಿದ್ದರೆ ಅವರಿಗೆ ತಿಂದ ಅನ್ನ ಜೀರ್ಣ ಆಗೊಲ್ಲ. ಆದರೂ ಮಕ್ಕಳನ್ನು ಹುಟ್ಟಿಸುವುದನ್ನು ಮನೆಯ ಯಜಮಾನ ಬಿಟ್ಟಿಲ್ಲ ಇಲ್ಲ ಅವನ ವಂಶದವರೂ ಬಿಟ್ಟಿಲ್ಲ. ಹುಟ್ಟಿಸಿದ ದ್ಯಾವ್ರು ಹುಲ್ಲು ಮೇಯಿಸುತ್ತಾನ ಅಂತ ಹೇಳಿಕೊಂಡು ಕಾರ್ಯಕ್ರಮ ನಿರಂತರವಾಗಿ ಸಾಗಿದೆ.
ಹೀಗಿದ್ದರೆ ಸಂಸಾರ ಹೇಗೆ ನಡೆಯೊತ್ತೆ ಅಂತ ನಿಮ್ಮ ಪ್ರಶ್ನೆ ಆಗಿದ್ದರೆ, ಅದಕ್ಕೂ ಒಂದು ದಾರಿ ಮಾಡಿಕೊಂಡಿದ್ದಾರೆ. ಅದೇ ಊರಿನಲ್ಲಿ ಇನ್ನ ೨೦ ಎರಿಯಾಗಳಿವೆ, ಅಲ್ಲಿ ಚೆನ್ನಾಗಿ ಮನೆ ನಡೆಸುತ್ತ ಇರುವರು ಇದ್ದಾರೆ, ಆ ಮನೆಗಳ ಪ್ರತಿಶತ ೪೦% ಆದಾಯ ಇವರಿಗೆ ಕೊಡಬೇಕು. ಸದಾ ನಾವು ಹಿಂದೆ ಇದ್ದೇವೆ ಅಂತ ಹೇಳಿ ಎಲ್ಲಾ ಸೌಲಭ್ಯಗಳನ್ನು ಮಾಡಿಕೊಂಡಿದ್ದಾರೆ. ಪ್ರತಿ ಮನೆಗೂ ಕಂಪ್ಯೂಟರ್ ಕೊಡುತ್ತಿವಿ ಅಂದಾಗ ಇವರು ಹಟ ಮಾಡಿ, ಅರ್ಧ ಬಾಚಿಕೊಂಡರು. ಆಮೇಲೆ ಅದನ್ನು ಹೇಗೆ ಉಪಯೋಗಿಸೋದು ಅಂತ ತಿಳಿಯದೆ ಅವುಗಳನ್ನು ಮಾರಿ ಗನ್,ಲಾಟಿ ಕೊಂಡುಕೊಂಡರು. ಕೊಂಡುಕೊಂಡ ಮೇಲೆ ಬಳಸಿದಿದ್ದರೆ ಹೇಗೆ ಬೇರೆ ಮನೆಗಳ ಜನರನ್ನು ಅಪಹರಿಸೋದು, ಸುಲಿಗೆ ಕಾರ್ಯಗಳಿಗೆ ಶುರು ಹಂಚಿಕೊಂಡರು.. ಅಪ್ಪಿತಪ್ಪಿ ಜನ ಇವರ ಎರಿಯಾ ಕಡೆ ಹೋದರು ಸಾಕು ಆವ್ರು ಅಪಹರಣ ಆಗುತ್ತಾರೆ. ಇದನ್ನು ಪ್ರಶ್ನಿಸುವ ಹಾಗೆ ಇಲ್ಲ ನೋಡಿ.. ಇಡಿ ಊರಿಗೆ ಒಂದು ಕಾನೂನು ಆದರೆ ಇವರಿಗೆ ಅದು ಅನ್ವಯಿಸುವದಿಲ್ಲ.


ಆ ಎರಿಯಾದಲ್ಲಿ ಜನ ಹೆಚ್ಚಾದ ಹಾಗೆ ಅವರು ಒಂದು ಕಾನೂನು ತಂದರು, ಪ್ರತಿ ೩ನೇ ಮತ್ತು ತದನಂತರ ಮಗು ಬೇರೆ ಎರಿಯಾಗೆ ಹೋಗಬೇಕು ಅಂತ. ಬೇರೆ ಎರಿಯಾಗೆ ಹೋದ ಜನರ ಸುಮ್ಮನೆ ಇದ್ರಾ,ಅಲ್ಲೂ ನಮ್ಮ ಎರಿಯಾದೆ ಕಾನೂನು ಅಂತ ದುಂಡಾವರ್ತನೆ ಶುರು ಮಾಡಿದರು. ಬೇರೆಯವರ ಮನೆಗೆ ಹೋಗಿ, ಅಲ್ಲಿಯ ನೀತಿ ನಿಯಮವನ್ನು ಗಾಳಿಗೆ ತೂರಿ ಅಲ್ಲಿ ಜನರಿಗೆ ಮಾಡಿದ್ದ ಅಡಿಗೆಯನ್ನು ತಿನ್ನುವದಕ್ಕೆ ಶುರು ಮಾಡಿದರು. ಕೇಳಿದರೆ ಪಕ್ಕದ , ನಮ್ಮ ಮನೆ ಅಂತ ಎನು ಇಲ್ಲ, ನಾವೆಲ್ಲಾ ಇರುವುದು ಒಂದೇ ಊರಿನಲ್ಲಿ ಆದ್ದರಿಂದ ಹಂಚಿಕೊಂಡು ತಿನ್ನಬೇಕು ಅಂತ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡರು.

ಇವರ ಬಾಯಿಗೆ ಹೆದರಿ ಜನ ಹಾಳಾಗಿ ಹೋಗಲಿ ಅಂತ ಬಿಟ್ಟುಬಿಟ್ಟರು. ಆದರೆ ಯಾವಾಗ ಈ ಜನ ತಮ್ಮ ಕಾಮವಾಂಛೆಗೆ ಹುಡುಗಿ-ಅಜ್ಜಿ ಅಂತ ನೋಡದೆ ಮೈ ಮೇಲೆ ಬಿದ್ರೊ ಆಗ ಅಲ್ಲಿನ ಜನರಲ್ಲಿ ತಾಳ್ಮೆ ಮಿತಿಮೀರಿತು. ಒದ್ದು ಬುದ್ಧಿ ಹೇಳಿದರು. ಆದರೆ ಎಮ್ಮೆ ಚರ್ಮದ ಜನರಿಗೆ ಇದು ಅರ್ಥ ಆಗಲೇ ಇಲ್ಲ. ಕಾಲಕ್ರಮೇಣ ಊಟದ ಬರವಾಗಿ ಒದ್ದಡುತ್ತ ಇರುವಾಗ , ಇವರು ಕಿತ್ತು ತಿನ್ನುವುದು ನಡ್ದೇ ಇತ್ತು. ದೊಡ್ಡದೇಶ ಎರಿಯಾದಲ್ಲಿ ಸ್ಥಳೀಯರಿಗೆ ಊಟ ಇಲ್ಲ, ಅದರಲ್ಲಿ ಇವರ ಕಿತ್ತುತನ ಸಹಿಸಿಕೊಳ್ಳಬೇಕೆ ಎಂಬ ಪ್ರಶ್ನೆ ಉಂಟಾಗಿ ಒಂದು ದಿನ ಕಿತ್ತು ತಿನ್ನುವದನ್ನು ನಿಲ್ಲಿಸಿ ಒದ್ದು ಓಡಿಸಿದರು.

ಅದೇ ದೊಡ್ಡ ತಪ್ಪು ಅನ್ನುವ ಹಾಗೆ ಜನ ಗಲಾಟೆ ಮಾಡಿದರು , ತಮ್ಮ ಎರಿಯಾದಲ್ಲೇ ಬೆಂಕಿ ಇಡುವುದು, ಗಲಾಟೆ ಮಾಡುವುದು ಶುರು ಮಾಡಿದರು. ತಾವು ಮಾಡುತ್ತ ಇರುವುಉದ್ ತಮನೇ ನಷ್ಟ ಅನ್ನುವ ಪರಿಜ್ಞಾನ ಇರಲಿಲ್ಲ. ಅಷ್ಟಕ್ಕೂ ಅವರು ಸಂಪಾದಿಸಿದ್ದ ಆಸ್ತಿಯೇ ?. ಮೊದಲೆ ಗನ್-ಲಾಂಗು ಸಂಸ್ಕೃತಿಯಲ್ಲಿ ಬೆಳೆದ ಯುವಕರು ಸುಮ್ಮನೇ ಇರುತ್ತಾರ, ಅದರಲ್ಲಿ ಒಬ್ಬ ಎದ್ದುನಿಂತೇ ಬಿಟ್ಟ. ೨೫ ವರುಷದ ಬಿಸಿರಕ್ತದ ಯುವಕ.
ಕಿತ್ತು ತಿನ್ನುವುದು ನಮ್ಮ ಹಕ್ಕು,ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಅಂತ ನಿರ್ಣಯ ಮಾಡಿ
ಒಂದು ಮುಂಜಾನೆ ರಿವೆಂಜ್ ತೆಗೆದುಕೊಳ್ಳಲು ಅಣಿಯಾದ.

ಆ ದೊಡ್ಡದೇಶ ಎರಿಯಾದಲ್ಲಿ ಆವತ್ತು ಶಾಂತಿ ಇತ್ತು, ಆಗ ಈ ಯುವಕ ಒಂದು ಹತ್ತು ಜನರನ್ನು ಒತ್ತೆ ಮಾಡಿಕೊಂಡು ಜನರನ್ನು ಹೆದರಿಸುವದಕ್ಕೆ ಶುರು ಮಾಡಿದ, ಜನರಿಗೆ ಗಾಬರಿ.
ಆ ಗಾಬರಿಯನ್ನು ತಿಳಿದ ಯುವಕ ಅಲ್ಲಿಯ ಜನರನ್ನು ನಿಂದಿಸಲು ಶುರು ಮಾಡಿದ. ಆಗ ಎಚ್ಚೆತ್ತುಕೊಂಡ ರಕ್ಷಣಾ ಪಡೆ ಇವನನ್ನು ಹೊಡೆದು ಉರುಳಿಸಿತು. ಜನರನ್ನು ಅವನ ಹಿಡಿತದಿಂದ ಪಾರು ಮಾಡಿತು. ಅದೇ ದೊಡ್ಡ ವಿವಾದ ಅಯಿತು.

ಬಿಮಾಲ ಎರಿಯಾದ ಜನರು ಆ ಹುಡುಗನ ಸಾವನ್ನು ನೆಪ ಮಾಡಿಕೊಂಡು ಮತ್ತೆ ಗಲಾಟೆ ಶುರು ಮಾಡಿದರು. ಆ ಹುಡುಗ ಬದುಕಿದ್ದರೆ ನೋಬೆಲ್ ಪಡೆಯುತ್ತಿದ್ದ,
ಅವನ ಸಾವು ಊರಿಗೆ ನಷ್ಟ ಅನ್ನುವ ರೀತಿಯಲ್ಲಿ ಬೊಬ್ಬೆ ಹೊಡೆದರು. ನಮ್ಮಲ್ಲಿ ಬಂದೂಕು ಸಾಮನ್ಯ್ ಆದ್ದರಿಂದ ಅವನು ತೆಗೆದುಕೊಂಡು ಬಂದಿದ್ದಾನೆ, ಅಬ್ಬಾಬ್ಬ ಎನು ಮಾಡುತ್ತಿದ್ದ ಒಂದಿಬ್ಬರನ್ನು ಸಾಯಿಸುತ್ತಿದ್ದ , ಕಮ್ಮಿ ಆದ ಜನರನ್ನು ನಾವು ತುಂಬಿಕೊಂಡುತ್ತಿದ್ದೆವು ನೀವು ಅವನನ್ನು ಸಾಯಿಸಿ ತಪ್ಪು ಮಾಡಿದಿರಿ ಎಂದು ಅಪಾದನೆಗಳ ಸರಮಾಲೆ ಮಾಡಿದರು. ಒಟ್ಟಿನಲ್ಲಿ ಈ ಪುಂಡು ಪೋಕರಿಯನ್ನು ಸಾಯಿಸಿದ್ದು ತಪ್ಪು ಎನ್ನುವ ರೀತಿಯಲ್ಲಿ ಆಪಾದನೆ ಬಂದಾಗ ದೊಡ್ಡದೇಶ ಎರಿಯಾ ಜನ ಸುಮ್ಮನೆ ಇರುತ್ತಾರೆಯೇ ಅವರು ತಿರುಗಿಸಿ ಕೊಟ್ಟರು. ಅವನೇನು ಹುತಾತ್ಮನಲ್ಲ, ಭಯೋತ್ಪಾದಕ ಅಂತ ಜರಿದರು...

ಮುಂದೇನಾಯಿತು ಕಾದು ನೋಡಿ.....

Saturday, October 25, 2008

ದೀಪಾವಳಿ ಹಬ್ಬದ ಶುಭಾಶಯಗಳು.

"In the day
In the night
Say it right
Say it all
You either got it
Or you don't "

ಇದು ಒಂದು ನೆಲ್ಲಿ ಫರಟೆಡೊ ಹಾಡಿನ ಸಾಲು....ಇದಕ್ಕೆ ಒಂದು ಸಾಲು ಸೇರಿಸಬೇಕು but say right (ie DEEPAVALI not DIWALI.)

ಇದನ್ನು ಯಾಕಪ್ಪ ಬಳಸಿದೆ ಎಂದರೆ ನಮ್ಮ ಕನ್ನಡಿಗರು "ಹ್ಯಾಪಿ ದಿವಾಳಿ" ಸಂದೇಶ ಕಳಿಸುತ್ತ ಇದ್ದಾರೆ. ಇದನ್ನು ನೋಡಿ ನಗಬೇಕೊ ಇಲ್ಲ ಅಳಬೇಕೊ ಗೊತ್ತಿಲ್ಲ. ಕನ್ನಡದಲ್ಲಿ ದಿವಾಳಿ ಎಂದರೆ ಬೇರೆ ಅರ್ಥವೆ ಇದೆ, ಒಂದು ರೀತಿಯಲ್ಲಿ ಪಾಪರ್, ನಿರ್ಗತಿಕ ಅಂತ ಅರ್ಥ. ಅದು ಹಾರಕೈ ಆಗೊಲ್ಲ ಶಾಪ ಆಗೊತ್ತೆ ಎಂದು ಹಾಗೆ ಹೇಳುವವರು ಮನಗಾಣಲಿ...




ದೀಪಗಳ ಹಬ್ಬ ದೀಪಾವಳಿ ಇತ್ತಿಚಿನ ಸ್ಟಾಕ್ ಮಾರ್ಕೆಟ್ ಕುಸಿತದಿಂದ ದಿವಾಳಿ ಆಗಿರಬಹುದು ಎಂದು ಪಂಡಿತರ ಅಂಬೋಣ.

ಕನ್ನಡಿಗರಿಗೆ ಈ ಹಬ್ಬ ಪರಭಾಷ ವ್ಯಾಮೋಹ,ಕೀಳರಿಮೆ,ಸ್ವಾಭಿಮಾನದ ಕೊರತೆ ಎನ್ನುವ ಕತ್ತಲನ್ನು ಹೋಗಲಾಡಿಸಿ ಕನ್ನಡ ಜಾಗೃತಿ ತರುವ ಬೆಳಕನ್ನು ತರಲಿ.

ಗುಟಿಕಿನಲ್ಲಿ ಅಮೃತ...

ಅಲ್ಲಾ.. ಇಷ್ಟು ಪೋಸ್ಟನಲ್ಲಿ ಬಹಳ ಸೀರಿಯಸ್ ವಿಷಯಗಳೇ ಇವೆಯಲ್ವಾ, ನೀವು ನಗುವುದೇ ಇಲ್ವಾ ಅಥವಾ ಸದಾ ಸೀರಿಯಸ್ ಆಗಿರುತ್ತಿರಾ ಅಂತ ಕೆಲವರು ಪ್ರಶ್ನೆ ಕೇಳಿದ್ದರು... ಅಯ್ಯೊ ಅಪಾರ್ಥ ಮಾಡಿಕೊಳ್ಳಬೇಡಿ, ಯಾಕೆ ಈ ತರಹದ ಸಂದೇಹಗಳು ನಿಮಗೆ ಎಂದರೆ ಬ್ಲಾಗಿನಲ್ಲಿ ನಗಿಸುವ ಒಂದು ಲೇಖನ ಇಲ್ಲ ಅಂದರು. ಅದು ಸರಿ, ನಾನು ಕಾಮೆಡಿ ಮಾಡಲು ಬ್ಲಾಗ್ ತೆಗೆದಿಲ್ಲ, ಅದಕ್ಕೆ ಅಂತ ಬೇರೆ ಬ್ಲಾಗ್ ಇವೆ ಎಂದರೂ ಮನುಷ್ಯನಿಗೆ ಎಲ್ಲೊ ಸಂದೇಶ ಕೊಡಬೇಕಾದರೆ ಹಾಸ್ಯದ ಮೂಲಕ ಕೊಡಬೇಕು,ಇಲ್ಲಾ ಚಿಕ್ಕ ಕಥೆಗಳ ಮೂಲಕ ಕೊಡಬೇಕು ಎಂದು ಗುರು ಶ್ರೀ ಅಂತೋಣಿ ಡಿ ಮೆಲ್ಲೊ ಹೇಳಿದ್ದು ಜ್ಞಾಪಕ ಬಂತು. ಗುರುಗಳ ಪುಸ್ತಕಗಳನ್ನು ಓದುತ್ತಿದ್ದರೆ, ಚಿಕ್ಕ ಚಿಕ್ಕ ಕಥೆಗಳಲ್ಲಿ ಅಂದೆತಾ ಆಧ್ಯಾತ್ಮಿಕತೆ ಹೇಳಿದ್ದರು ಅಂತ ಆಶ್ಚರ್ಯ ಆಗುತ್ತದೆ.

ಮನುಷ್ಯನ ಅಳತೆಗೆ ಬಟ್ಟೆ ಇರಬೇಕೆ ವಿನಹ ಬಟ್ಟೆ ಅಳತೆಗೆ ಮನುಷ್ಯನನ್ನು ಕತ್ತರಿಸಬಾರದು ಇದು ಅವರು ಹೇಳುವ ಒಂದು ಮಾತು, ಈ ಮಾತಿನಲ್ಲೇ ಅನೇಕ ವಿಷಯಗಳು ಅಡಗಿವೆ. ಮುಂದೆ ಅದರ ಬಗ್ಗೆ ಬರೆಯುತ್ತೆನೆ.


ಒಂದು ಕಥೆ ಕೇಳೋಣ...

ಎನಾದರೂ ಆಗು, ಮೊದಲು ಮಾನವನಾಗು

ಒಮ್ಮೆ ತಮಿಳುನಾಡಿನಲ್ಲಿ ಒಬ್ಬ ವ್ಯಾಪಾರಕ್ಕೆಂದು ಹೋದವನು, ಸಮುದ್ರದಲ್ಲಿ ಬಂದ ಗಾಳಿಯಿಂದ ಶ್ರೀಲಂಕಾ ತಲುಪಿದ. ಅವನನ್ನು ಕಂಡ ಅಲ್ಲಿನ ರಾಜ ವಿಭಿಷಣ, ಅಯ್ಯೋ ಮಾನವ ರೂಪದಲ್ಲಿ ರಾಮ ಬಂದಿದ್ದಾನೆ ಅಂತ ಖುಶಿ ಪಟ್ಟು ತುಂಬಾ ಸತ್ಕಾರ ಮಾಡಿದರು. ಈ ಕಥೆಯನ್ನು ಒಮ್ಮೆ ಪರಮಹಂಸರು ಕೇಳಿದಾಗ ಅವರು ಹೇಳಿದ್ದು "ಅಬ್ಬಾ..ಎಂತಹ ಮಹತ್ ಯೋಚನೆ, ಒಂದು ಕಲ್ಲನ್ನು ಮನುಷ್ಯ ದೇವರು ಎಂದುಕೊಳ್ಳುವ ಹಾಗೆ ಆದರೆ, ಮನುಷ್ಯನಲ್ಲಿ ಎಲ್ಲಾ ಜೀವಭೂತದಲ್ಲಿ ದೇವರನ್ನು ಯಾಕೆ ಕಾಣಬಾರದು "??.

ಕನ್ನಡ ಎನ್ನುವುದು
ಕನ್ನಡ ಅನ್ನುವುದು ಒಂದು ರೀತಿಯ ಬಾಟಲಿ ಇದ್ದ ವೈನ್ ಹಾಗೆ, ಎಲ್ಲರೂ ಅದರ ಬಗ್ಗೆ ಮಾತನಾಡುತ್ತಾರೆ, ಅದರ ಲೇಬಲ್ ಓದುತ್ತಾರೆ, ಆದರೆ ಅದರ ಅಮೃತ ರುಚಿ ಉಂಡವರು ಬಹಳ ಕಡಿಮೆ.